ಬೆಂಗಳೂರು | ರಾಜ್ಯದ ಬಹುತೇಕ ಜಿಲ್ಲೆಗಳ ಮೇಲೆ ಮತ್ತೆ ಮಳೆಯ (Heavy Rain) ಗಂಭೀರ ಕಪ್ಪು ಮೋಡ ಆವರಿಸಿದೆ. ಮೇ 24ರವರೆಗೆ ವ್ಯಾಪಕ ಮಳೆಯ ಸಾಧ್ಯತೆ ಇದ್ದು, ಹಲವೆಡೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.
Orange Alert
ಮೇ 22ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಇದರ ಪರಿಣಾಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆ ಸುರಿಯುವ ನಿರೀಕ್ಷೆ ವ್ಯಕ್ತವಾಗಿದೆ. ಗರಿಷ್ಠ ಉಷ್ಣಾಂಶದಲ್ಲಿಯೂ ಇಳಿಕೆಯಾಗಲಿದ್ದು, ಬಹುತೇಕ ಜಿಲ್ಲೆಗಳು ಶೀತವಾತಾವರಣಕ್ಕೆ ಒಳಗಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ತೀವ್ರ ಮಳೆಯ ಮುನ್ಸೂಚನೆ ಹಿನ್ನೆಲೆ ಆರೆಂಜ್ ಅಲರ್ಟ್ (Orange Alert) ಜಾರಿಗೊಳಿಸಲಾಗಿದೆ.

ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗಾಳಿ ಸಹಿತ ಮಳೆ ಆಗುವ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30–40 ಕಿ.ಮೀ ಇರಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಸಾರ್ವಜನಿಕರು ಮತ್ತು ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ಹಾಗೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ (Meteorological Department) ಮನವಿ ಮಾಡಿದೆ.