Heavy Rain | ಎಚ್ಚರ..! ಎಚ್ಚರ..! ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು | ರಾಜ್ಯಾದ್ಯಂತ ಮುಂಗಾರು ಮಳೆ (Monsoon Rain) ತನ್ನ ಪ್ರಭಾವ ತೋರಿಸಲು ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಪ್ರಕಾರ, ಮೇ 28ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆಯಿದೆ.

ಕರಾವಳಿ ಭಾಗದಲ್ಲಿ (ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ) ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬುಧವಾರದಿಂದ ಮಳೆ ತೀವ್ರತೆ ಇಳಿಯುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮಳೆ (Heavy Rain) ಎಚ್ಚರಿಕೆಗಳ ವಿವರ

  • ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ  “ರೆಡ್ ಅಲರ್ಟ್”
  • ಧಾರವಾಡ, ಬೆಳಗಾವಿಗೆ “ಆರೆಂಜ್ ಅಲರ್ಟ್”
  • ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ಮುಟ್ಟುವ ನಿರೀಕ್ಷೆ
  • ಮೈಸೂರು, ಹಾಸನ, ಮಂಡ್ಯ, ದಾವಣಗೆರೆ, ಬೆಂಗಳೂರು, ತುಮಕೂರು, ರಾಮನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ

ಇದನ್ನು ಓದಿ : BY Vijayendra | ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭ

ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಬುಧವಾರದವರೆಗೆ ಸಾಧಾರಣದಿಂದ ಭಾರಿ ಮಳೆಯ (Heavy Rain) ಮುನ್ಸೂಚನೆ ಇದೆ.

ಶಿರಾಡಿ ಘಾಟ್‌ನಲ್ಲಿ ಎರಡು ಕಡೆ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಾವೇರಿ ನದಿಯ ನೀರಿನ ಮಟ್ಟ ಉಕ್ಕುತ್ತಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾರವಿಡೀ ಸಾಧಾರಣದಿಂದ ಭಾರಿ ಮಳೆ (Heavy Rain) ಆಗಲಿರುವ ಸಾಧ್ಯತೆ ಇದೆ. ಹೀಗಾಗಿ ಸುರಕ್ಷಿತವಾಗಿರಿ, ಎಚ್ಚರಿಕೆಯಿಂದಿರಿ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *