Site icon Karnataka 360

Abdul Rahiman Murder | ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ

ಶಿವಮೊಗ್ಗ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅನೇಕ ಹತ್ಯೆಗಳ (Abdul Rahiman Murder) ವಿಚಾರದಲ್ಲಿ ಸರ್ಕಾರ ಯಾವುದೇ ಜಾತಿ ಅಥವಾ ಧರ್ಮವನ್ನೂ ನೋಡದೆ ನಿಸ್ಪಕ್ಷಪಾತ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಭಯ ಹುಟ್ಟಿಸಿದ ಅಬ್ದುಲ್ ರಹಿಮಾನ್ ಹತ್ಯೆ (Abdul Rahiman Murder)

ಬಂಟ್ವಾಳ ತಾಲ್ಲೂಕಿನ ಕೊಳತ್ತ ಮಜಲು ಗ್ರಾಮದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ (Abdul Rahiman Murder) ಪ್ರಕರಣ ಸಂಬಂಧ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ಅವರ ಹತ್ಯೆ ಮಾಡಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇದನ್ನು ಓದಿ : Unidentified Person | ಕೊನೆಗೆ ಹೆಣ ತೆಗೆದುಕೊಂಡು ಹೋಗುವುದಕ್ಕಾದ್ರು ಬಂದ್ರಿ ಎಂದು ಮನವಿ ಮಾಡಿದ ಪೊಲೀಸರು

ಅಮಾಯಕ ಅಶ್ರಫ್ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯನ್ನೂ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಆರೋಪಿಗಳನ್ನು ಹಿಡಿದಿದೆ. ಈಗ ಅಬ್ದುಲ್ ಅವರ ಪ್ರಕರಣದಲ್ಲೂ ಪೊಲೀಸರು ಪರಿಣಾಮಕಾರಿಯಾಗಿ ಕ್ರಮವಹಿಸುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಶವಗಳ ಮೇಲೆ ರಾಜಕಾರಣ ಮಾಡುವುದು ನಿಜಕ್ಕೂ ನಿರಾಶಾಜನಕ. ಪ್ರಚೋದನಕಾರಿ ಭಾಷಣಗಳು ಸಮಾಜದಲ್ಲಿ ವಿಷ ಬೀರುತ್ತಿವೆ. ಇವುಗಳನ್ನು ತಡೆಯುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಕರಾವಳಿಯಲ್ಲಿ ಶೀಘ್ರದಲ್ಲೇ “ಆ್ಯಂಟಿ ಕಮ್ಯುನಲ್ ಫೋರ್ಸ್” ಅಂದರೆ ಕೋಮು ನಿಗ್ರಹ ದಳವನ್ನು ರಚಿಸಲಾಗುತ್ತಿದೆ ಎಂದು ಘೋಷಿಸಿದರು. ಪ್ರತಿಕಾರದ ಹತ್ಯೆಗಳನ್ನು ತಡೆಯುವುದು ಸರ್ಕಾರದ ಆದ್ಯತೆ ಎನ್ನುವುದನ್ನು ಸ್ಪಷ್ಟಪಡಿಸಿದರು.

Exit mobile version