Manju

Operation Sindoor

Operation Sindoor | ಕೊತ್ತೂರು ಮಂಜುನಾಥ್ ವಿರುದ್ಧ ದಾಖಲಾಯ್ತು ದೂರು..!

ಬೆಂಗಳೂರು | ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ (Kottur Manjunath) ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ (Banashankari Police Station) ದೂರು ದಾಖಲಾಗಿದೆ. ಈ ದೂರನ್ನು ನಾಗರಿಕ ಹಕ್ಕು ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ಸಿಂಗ್ ಸಲ್ಲಿಸಿದ್ದು, ಶಾಸಕರು ಭಾರತೀಯ ಸೇನೆಯ ಆಪರೇಷನ್ ಸಿಂದೂರ್ (Operation Sindoor) ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. Operation Sindoor ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್…

Read More
Operation Kamala

Operation Kamala | ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರಲ್ಲ – ಸಿದ್ದರಾಮಯ್ಯ

ವಿಜಯನಗರ | ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ (Operation Kamala) ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಲೇವಡಿ ಮಾಡಿದರು. Operation Kamala ಹೊಸಪೇಟೆಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ…

Read More

Actor Darshan | ರೇಣುಕಾಸ್ವಾಮಿ ಕೊಲೆ ಪ್ರಕರಣ : ನ್ಯಾಯಾಲಯದಲ್ಲಿ ನಡೆದಿದ್ದೇನು..?

ಬೆಂಗಳೂರು | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಮುಂದುವರೆದಿರುವ ವೇಳೆ ನಟ ದರ್ಶನ್‌ (Actor Darshan) ಸೇರಿದಂತೆ ಎಲ್ಲಾ ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಆರೋಪಪಟ್ಟಿಯ ಪ್ರತಿಯನ್ನು ನೀಡಲು ಪ್ರಾಸಿಕ್ಯೂಷನ್‌ಗೆ ಬೆಂಗಳೂರು ಸತ್ರ ನ್ಯಾಯಾಲಯ ಮಂಗಳವಾರ ನಿರ್ದೇಶನ ನೀಡಿದೆ. ಪ್ರಕರಣದ ವಿಚಾರಣೆಯನ್ನು 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ಅವರು ನಡೆಸಿದರು. ತನಿಖೆ ವೇಳೆ ಜಪ್ತಿ ಮಾಡಿರುವ ₹34 ಲಕ್ಷ ಬಿಡುಗಡೆಗೆ ನಟ ದರ್ಶನ್ (Actor…

Read More
Orange Alert

Orange Alert | ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ:  ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು | ರಾಜ್ಯದ ಬಹುತೇಕ ಜಿಲ್ಲೆಗಳ ಮೇಲೆ ಮತ್ತೆ ಮಳೆಯ (Heavy Rain) ಗಂಭೀರ ಕಪ್ಪು ಮೋಡ ಆವರಿಸಿದೆ. ಮೇ 24ರವರೆಗೆ ವ್ಯಾಪಕ ಮಳೆಯ ಸಾಧ್ಯತೆ ಇದ್ದು, ಹಲವೆಡೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. Orange Alert ಮೇ 22ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಇದರ ಪರಿಣಾಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆ ಸುರಿಯುವ ನಿರೀಕ್ಷೆ ವ್ಯಕ್ತವಾಗಿದೆ….

Read More

Government Bus | ಅವೈಜ್ಞಾನಿಕ ಸೇತುವೆ ಕಾಮಗಾರಿ ಎಫೆಕ್ಟ್ : ಮಣ್ಣಿನಲ್ಲಿ ಹೂತು ಬಸ್ ಪರದಾಟ

ತುಮಕೂರು | ಜಿಲ್ಲೆಯ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಕೆಕೆ ಪಾಳ್ಯ ಮತ್ತು ಬಸವನಹಳ್ಳಿ ನಡುವಿನ ತಾತ್ಕಾಲಿಕ ಸೇತುವೆ (Temporary Bridge) ಬಳಿ ಮಾರ್ಗದೋಷದಿಂದ ಸರ್ಕಾರಿ ಬಸ್ (Government Bus) ಮಣ್ಣಿನಲ್ಲಿ ಸಿಕ್ಕಿ, ಸುಮಾರು 3 ಗಂಟೆಗಳ ಕಾಲ ಪರದಾಡಿದ ಘಟನೆ ವರದಿಯಾಗಿದೆ. ಬಸ್‌ನಲ್ಲಿ ಸುಮಾರು 25 ಪ್ರಯಾಣಿಕರು (Passengers) ಇದ್ದರು. ಮಳೆಗಾಲದ ಹಿನ್ನೆಲೆಯಲ್ಲೂ ಸೂಕ್ತ ತಂತ್ರಜ್ಞಾನ ಅನುಸರಿಸದೆ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯು ಈ ಅವಘಡಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಪ್ರಕಾರ,…

Read More

Amrutur Police Station | ಲವ್, ಸೆಕ್ಸ್, ದೋಖಾ ಪ್ರಕರಣ : ಮಹಿಳಾ ಪೇದೆಗೆ ಪುರುಷ ಪೇದೆಯಿಂದ ಮೋಸ

ತುಮಕೂರು | ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆಯಲ್ಲಿ (Amrutur Police Station) ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್ಟೇಬಲ್ (Female Constable) ಮತ್ತು ಪುರುಷ ಪೇದೆಯ (Male Constable) ನಡುವಿನ ಸಂಬಂಧ ವಿವಾದಾತ್ಮಕ ತಿರುವು ಪಡೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮನಾಪುರ ಗ್ರಾಮದ ನಿವಾಸಿ ಭಗವಂತರಾಯ ಬಿರಾದಾರ (Bhagwantraya Biradar) ಎಂಬ ಪೇದೆ, ಮಹಿಳಾ ಕಾನ್ಸ್ಟೇಬಲ್‌ಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದನು. 2023ರ ಫೆಬ್ರವರಿ 14ರಂದು ಮಹಿಳಾ ವಸತಿ ಗೃಹದಲ್ಲಿ ಸಾಯಿಬಾಬಾ ದೇವರ…

Read More

CM Siddaramaiah | ದೊಡ್ಡ ಸಾಲಗಾರ ಮುಖ್ಯಮಂತ್ರಿ ಸಿದ್ದರಾಮಯ್ಯ – ಬಸವರಾಜ ಬೊಮ್ಮಾಯಿ

ಬೆಂಗಳೂರು | ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡು ವರ್ಷ ಆರ್ಥಿಕವಾಗಿ ಕರಾಳ ದಿನಗಳು. ಕಳೆದ ಎರಡು ವರ್ಷದಲ್ಲಿ ಎರಡೂವರೆ ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ. ಕರ್ನಾಕದ ಇತಿಹಾದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಹೊಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ…

Read More

Department of Horticulture | ರೈತರಿಗೆ ಶೇ.25 ರಿಂದ 50ರಷ್ಟು ಸಹಾಯಧನ ಸಿಗುತ್ತೆ ಬೇಗ ಅರ್ಜಿ ಹಾಕಿ

ತುಮಕೂರು | ತೋಟಗಾರಿಕೆ ಇಲಾಖೆಯು (Department of Horticulture) 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ (Entrepreneurs) ಅರ್ಜಿ ಆಹ್ವಾನಿಸಿದೆ. ಸ್ಟ್ರಾಬೆರಿ, ಬಾಳೆ (Banana), ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ…

Read More

Fertilizer Use | ರೈತರು ಸಂಯುಕ್ತ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ಸಲಹೆ

ತುಮಕೂರು | ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಸ್ವಾಭಾವಿಕವಾಗಿ ದೊರೆಯುವ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ (Fertilizer Use) ಲಭ್ಯವಾಗುತ್ತದೆ. ಸಸ್ಯಗಳಿಗೆ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಲಘು ಪೋಷಕಾಂಶಗಳಾದ (Fertilizer Use) ಕಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು…

Read More

Tumkur Metro | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಕೆಂಡ

ತುಮಕೂರು | ಬಿಜೆಪಿ ಸಂಸದ ತೇಜಸ್ವಿ ಸೂರ್ಯ (MP Tejaswi Surya) ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ (MLA Suresh Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿಗೆ ಮೆಟ್ರೋ (Tumkur Metro) ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ಗೆ ವಿರೋಧ ಮಾಡಿರುವುದು ಅವರವರ ಅಭಿಪ್ರಾಯ, ಆದರೆ ಇದು ಇನ್ನೂ ಆರಂಭವೇ ಆಗಿಲ್ಲ ಹೀಗಾಗಿ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದರು….

Read More