ಬೆಂಗಳೂರು | ವಿಧಾನಸಭೆಯಿಂದ ಅಮಾನತುಗೊಂಡಿದ್ದ 18 ಬಿಜೆಪಿ ಶಾಸಕರ ವಿರುದ್ಧದ ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಭಾನುವಾರ (BJP Congress Meeting) ಪ್ರಕಟಿಸಿದರು.
ಸ್ಪೀಕರ್ ನೇತೃತ್ವದ ಸಂಧಾನ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸದನದ ಸ್ಪೀಕರ್ ಕುರ್ಚಿಗೆ ಅವಮಾನ ತೋರಿಕೆ ಹಾಗೂ ಮಸೂದೆ ಪ್ರತಿಗಳನ್ನು ಹರಿದು ಎಸೆದ ಪ್ರಕರಣದ ಹಿನ್ನೆಲೆಯಲ್ಲಿ, ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.
ಘಟನೆ ಮರುಕಳಿಸದಂತೆ (BJP Congress Meeting) ಎಚ್ಚರಿಕೆ ನೀಡಿದ ಯು ಟಿ ಖಾದರ್
ಈ ಸಂಬಂಧ ಮಾತನಾಡಿದ ಸ್ಪೀಕರ್ ಯು ಟಿ ಖಾದರ್, ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಸಹ ನನಗೆ ಮನವಿ ಸಲ್ಲಿಸಿದ್ದರು. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯಿಂದ ಇರುತ್ತೇವೆ ಎಂಬ ಭರವಸೆ ನೀಡಲಾಗಿದೆ. ಯಾವುದೇ ಷರತ್ತುಗಳಿಲ್ಲದೆ ನಾನು ಸಂತೋಷದಿಂದ ಅಮಾನತು ಹಿಂಪಡೆದಿದ್ದೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ. ಪಾಟೀಲ್ (BJP Congress Meeting) ಸಭೆಯಲ್ಲಿ ಭಾಗಿಯಾಗಿದ್ದರು.
ಇದನ್ನು ಓದಿ : BY Vijayendra | ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭ
ಸಂಧಾನ ಸಭೆಯ ಬಳಿಕ ಸ್ಪೀಕರ್ ಮಾತನಾಡಿ, ದುರ್ನಡತೆ ವಿರುದ್ಧ ಕ್ರಮ ಕೈಗೊಳ್ಳುವುದು ನನ್ನ ಹೊಣೆಗಾರಿಕೆ. ಆದರೆ, ಎಲ್ಲರೂ ನಮ್ಮ ಸಂಸತ್ ಮಿತ್ರರಾಗಿರುವ ಕಾರಣವಾಗಿ ಪರಿಸ್ಥಿತಿಯನ್ನು ಶಮನಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಈ ಬೆಳವಣಿಗೆ ಬಳಿಕ, ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ಸಂತಸದ ವಾತಾವರಣವಿದ್ದು, ಅಧಿವೇಶನದ ಮುಂದಿನ ಚಟುವಟಿಕೆಗಳು ಸುಗಮವಾಗಿ ನಡೆಯುವ ನಿರೀಕ್ಷೆಯಿದೆ.