ತುಮಕೂರು | ರಾಷ್ಟ್ರಧ್ವಜಕ್ಕೆ ಅವಮಾನ (Insult To The National Flag) ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ (Madhugiri) ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಮೇ 19 ಸೋಮವಾರ ಬೆಳಗ್ಗೆ ಕಂಡುಬಂದಿದೆ.
ಮಧುಗಿರಿ ಪಟ್ಟಣ ಏಕಶಿಲಾ ಬೆಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದಿದ್ದು ಪ್ರತಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದಕ್ಕೆ ಹೊಂದಿಕೊಂಡಂತೆ ಕಬ್ಬಿಣದ ಸರಳುಗಳು ಇರುವ ಕಾಂಪೌಂಡಿಗೆ ಕಳೆದ ಕೆಲವು ದಿನಗಳ ಹಿಂದೆ ತ್ರಿವರ್ಣ ಧ್ವಜನ್ನು (National Flag) ನೇತು ಹಾಕಿ ಹೋಗಿದ್ದಾರೆ. ಪ್ರತಿನಿತ್ಯ ಈ ಭಾಗದಲ್ಲಿ ಸಾರ್ವಜನಿಕರು ಓಡಾಡುತ್ತಾರೆ. ರಾತ್ರಿ ವೇಳೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯವಾಗಿದೆ.
ಈ ಭಾಗದಲ್ಲಿ ಮಧುಗಿರಿ ಪುರಸಭೆ ಸ್ವಚ್ಛ ಮಾಡುವ ಕೆಲಸವನ್ನು ಮಾಡಿದೆ. ನೈರ್ಮಲ್ಯ ಕಾಪಾಡುವ ಜವಾಬ್ದಾರಿ ಹೊಂದಿತ್ತಿದೆ. ಆದರೆ ಇದುವರೆಗೂ ಅಲ್ಲಿರುವ ಬಾವುಟ (National Flag) ಸಿಬ್ಬಂದಿಗಳ ಕಣ್ಣಿಗೆ ಬಿದ್ದಂತೆ ಕಾಣಿಸುತ್ತಿಲ್ಲ. ಈ ಘಟನೆಯ ಹಿನ್ನೆಲೆಯಲ್ಲಿ ದೇಶಭಕ್ತರು ಮತ್ತು ಸಾರ್ವಜನಿಕರು ಸಾಕಷ್ಟು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈಗಲಾದರು ಎಚ್ಚೆತ್ತು ಬಾವುಟವನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.