
Cauvery Aarti | ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ..? : ಡಿ ಕೆ. ಶಿವಕುಮಾರ್ ವಾಗ್ದಾಳಿ
ಬೆಂಗಳೂರು | ದೇವರು ಮತ್ತು ಧರ್ಮ ಬಿಜೆಪಿಯವರ ವ್ಯಕ್ತಿಗತ ಆಸ್ತಿಯೇ..? ಪೂಜಾ ಕಾರ್ಯಗಳನ್ನು ನಡೆಸಲು ಬಿಜೆಪಿ ಮಾತ್ರ ಹಕ್ಕುದಾರರೇ..? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿಯಿದೆಯೇ.? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಕೆಆರ್ಎಸ್ ಬಳಿ ಕಾವೇರಿ ಆರತಿ (Cauvery Aarti) ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದೇವೆ. ಇದರ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಅದರಲ್ಲಿ ಸುಮಾರು 25,000 ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಯಶಸ್ಸು…