ತುಮಕೂರು : ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ತುಮಕೂರು (Tumkur) ಮಹಾನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ, ಅಭಿವೃದ್ಧಿ ಹೊಂದುತ್ತಿರುವ ನಗರ. ಇತ್ತೀಚಿಗಷ್ಟೇ ಜಿಲ್ಲಾಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ (Dr. G Parameshwar) ಈಗ ಇರುವಂತಹ ಮಹಾನಗರ ಪಾಲಿಕೆಯ 35 ವಾರ್ಡ್ಗಳನ್ನು ವಿಸ್ತರಣೆ ಮಾಡುವ ಸೂಚನೆ ನೀಡಿದ್ದರು. ಅದರ ಮುಂದಿನ ಹಂತ ಎನ್ನುವಂತೆ ಮತ್ತೊಂದು ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ.
ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ತುಮಕೂರಿನ ನೆಡದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಹೇಳಿದ್ದಾರೆ.
ಒಟ್ಟಾರೆಯಾಗಿ ಈ ಎಲ್ಲಾ ಬೆಳವಣಿಗೆಗಳನ್ನು ನೋಡುತ್ತಿದ್ದರೆ ತುಮಕೂರು ಮಹಾನಗರ ಪಾಲಿಕೆ ಜನಸಂಖ್ಯೆ ಆಧಾರದ ಮೇಲೆ ಅಭಿವೃದ್ಧಿಯ ಹಿನ್ನೆಲೆಯಲ್ಲಿ ವಿಸ್ತರಣೆ ಮಾಡುವುದು ಅನಿವಾರ್ಯ. ಚುನಾವಣೆ ಮುಗಿದು ಒಂದು ವರ್ಷ ಕಳೆಯುತ್ತಿದ್ದರು, ಜನಪ್ರತಿನಿಧಿಗಳು ಇಲ್ಲದೆ ಅಭಿವೃದ್ಧಿ ಕುಂಠಿತವಾಗುತ್ತಿದೆ. ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕು ಆದಷ್ಟು ಬೇಗ ಚುನಾವಣೆ ಮಾಡಬೇಕು ಎನ್ನುವುದು ಸಾರ್ವಜನಿಕರ ಅಭಿಮತ.