Tumkur Breaking |  ಡಾ. ಜಿ ಪರಮೇಶ್ವರ್ ಗೆ ಬೆಳ್ಳಂ ಬೆಳಗ್ಗೆ ಶಾಕ್ ಕೊಟ್ಟ ಇಡಿ

ತುಮಕೂರು | ಗೃಹ ಸಚಿವ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ (Dr. G Parameshwar) ಒಡೆತನದ ತುಮಕೂರಿನ (Tumkur Breaking) ಸಂಸ್ಥೆಗಳು ಸೇರಿದಂತೆ ಪ್ರತಿಷ್ಠಿತ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ (Siddhartha Educational Institutions) ಮೇಲೆ ಬುಧವಾರ ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿರುವ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಕುಣಿಗಲ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ರಸ್ತೆಯ ಮಂಚಕಲ್ ಕುಪ್ಪೆ ಬಳಿ ಇರುವ ಎಸ್ ಎಸ್ ಐ ಟಿ ಕಾಲೇಜು, ನೆಲಮಂಗಲದ ಟಿ ಬೇಗೂರು ಬಳಿ ಇರುವ ಶ್ರೀ ಸಿದ್ದಾರ್ಥ ಕಾಲೇಜು (Siddhartha Educational Institutions) ಮೇಲೆ ದಾಳಿ ನಡೆಸಲಾಗಿದೆ.

ಕಳೆದ ನಾಲ್ಕು ವರ್ಷದ ಹಿಂದೆ 2019 ರಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು. ಅದಲ್ಲದೆ ಇತ್ತೀಚೆಗೆ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಲೆ ಬಾಳುವ ಆಸ್ತಿಗಳನ್ನು ತಮ್ಮ ಕುಟುಂಬದವರ ಹೆಸರಿನಲ್ಲಿ ಖರೀದಿಸಿದ್ದರು ಎಂಬ ಗುಮಾನಿ ಇತ್ತು. ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *