Tumakuru | ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಶಾಸಕ ಎಂ ಟಿ ಕೃಷ್ಣಪ್ಪ

ತುಮಕೂರು | ಆಪರೇಷನ್ ಸಿಂಧೂರ್ (Operation Sindoor) ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಹೇಳಿಕೆಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ (MT Krishnappa) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.

ತುರುವೇಕೆರೆ ಪಟ್ಟಣದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕ್ಯಾಬಿನೆಟ್. ಇವರಿಗೆ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಸರ್ಕಾರ. ಇದು ರಾಜ್ಯದ ಜನರ ತೆರಿಗೆ ಹಣದಿಂದ ಜಾರಿಗೊಳಿಸಲಾಗಿದೆ. ಇದರ ಕ್ರೆಡಿಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಕೊಡುವಂತಿಲ್ಲ. ಅವರ ಫಂಡ್ ನಿಂದ ಕೊಟ್ಟಿರುವುದು ಅಲ್ಲ. ಹೀಗಾಗಿ ಗ್ಯಾರಂಟಿಗಳ ಯಶಸ್ಸಿನ ಕೊಡುಗೆಯನ್ನು ರಾಜ್ಯದ ತೆರಿಗೆದಾರಿಗೆ ನೀಡಬೇಕು ಎಂದು ತಿರುಗೆಟು ನೀಡಿದ್ದಾರೆ.

Leave a Reply

Your email address will not be published. Required fields are marked *