ತುಮಕೂರು | ಕಾಡು ಹಂದಿಯನ್ನು ಬೇಟೆಯಾಡಿ (Wild Boar Hunting) ಮಾಂಸವನ್ನು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಯನ್ನು ಅರಣ್ಯ ಇಲಾಖೆ (Gubbi Forest Department) ಸಿಬ್ಬಂದಿ ವಶಕ್ಕೆ ಪಡೆದಿರುವಾಗ ಘಟನೆ ಇದೀಗ ಬೆಳಕಿಗೆ ಬಂದಿದೆ.
ಗುಬ್ಬಿ ತಾಲೂಕಿನ ಕೋಡಿನಾಗೇನಹಳ್ಳಿ ಗ್ರಾಮದಲ್ಲಿ ಖಚಿತ ಮಾಹಿತಿಯ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ಮಾಡಿದ್ದು, ಸುಮಾರು 80 ಕೆಜಿ ಕಾಡು ಹಂದಿಯ ಮಾಂಸ (Wild Boar Hunting) ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಆರೋಪಿ ಪ್ರದೀಪ್ ನನ್ನು ಬಂಧಿಸಿದ್ದು ಮತ್ತೋರ್ವ ಆರೋಪಿ ಸಿದ್ದರಾಜು ತಪ್ಪಿಸಿಕೊಂಡಿದ್ದಾರೆ. ಈತನ ಬಂಧಕ್ಕೆ ಬಂಧನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಸಾಕಷ್ಟು ದಿನಗಳಿಂದ ಕಾಡು ಪ್ರಾಣಿಗಳನ್ನು ಬೇಟಿಯಾಡಿ ಅದರ ಮಾಂಸವನ್ನು ಆರೋಪಿಗಳಾದ ಸಿದ್ದರಾಜು ಮತ್ತು ಪ್ರದೀಪ್ ಮಾರಾಟ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿ ಬರುತ್ತಿತ್ತು. ಇದೀಗ ಮಾಲು ಸಮೇತವಾಗಿ ವಲಯ ಅರಣ್ಯಾಧಿಕಾರಿ ಸತೀಶ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.